ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಟೋಕನ್ ವ್ಯವಸ್ಥೆ ಇಲ್ಲ: ಸುದೇಶ್ ಶೆಟ್ಟಿ

0

ಪುತ್ತೂರು: ನ.13 ರಂದು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ. ಕಾರ್ಯಕ್ರಮದಲ್ಲಿ‌ ಭಾಗವಹಿಸಿ ವಸ್ತ್ರ ಪಡೆದುಕೊಳ್ಳಬಹುದಾಗಿದೆ.

ಸುಮಾರು 15 ಕೌಂಟರುಗಳನ್ನು ಮಾಡಲಾಗಿದ್ದು ನೇರವಾಗಿ ಬಂದು ವಸ್ತ್ರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಟೋಕನ್ ಪಡೆದುಕೊಳ್ಳಬೇಕು ಎಂಬ ಯಾವುದೇ ನಿಮಯವನ್ನು ಮಾಡಿಲ್ಲ ಸಾರ್ವಜನಿಕರು ಹೆಚ್ಚಿನ‌ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here