ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಎಸ್.ಜಿ.ಎಫ್.ಐ ಗೆ ಆಯ್ಕೆ

0

ಪುತ್ತೂರು: ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ನಡೆಸಲ್ಪಟ್ಟ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ನ.4 ರಿಂದ 8ರ ವರೆಗೆ ಬಿಹಾರದ ಬೆತಿಯಾದಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯಲ್ಲಿ ಕಲಿಯುತ್ತಿರುವ ಸಮೃದ್ಧಿ ಜೆ ಶೆಟ್ಟಿ (ನೆಲ್ಲಿಕಟ್ಟೆ ಮಾಜಿ ನಗರಸಭಾ ಅಧ್ಯಕ್ಷ ಜಗದೀಶ್ ಶೆಟ್ಟಿ ಹಾಗೂ ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿಯವರ ಪುತ್ರಿ) ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟಯಲ್ಲಿ 100m ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಹಾಗೂ ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ಬೆಳ್ಳಿಯ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 100m ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಪಡೆದು ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿರುತ್ತಾರೆ. ಡಿಸೆಂಬರ್ ನಲ್ಲಿ ರಾಮಕೃಷ್ಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೂ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here