ಕಡಬ: ದತ್ತಿನಿಧಿ ಉಪನ್ಯಾಸ, ಸಾಹಿತ್ಯ ಜಾಗೃತಿ ಕಾರ್ಯಕ್ರಮ

0

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢಶಾಲೆ ಕಡಬ ಇದರ ಸಹಯೋಗದಲ್ಲಿ ದತ್ತಿನಿಧಿ ಉಪನ್ಯಾಸ ಹಾಗೂ ಸಾಹಿತ್ಯ ಜಾಗೃತಿ ಕಾರ್ಯಕ್ರಮ ನ.10ರಂದು ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.


ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲುರವರು ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆ, ನಾಡಿನ ಸಂಸ್ಕೃತಿ ಬೆಳೆಯಬೇಕಾದರೆ ಮಕ್ಕಳು ಓದುವ ಹವ್ಯಾಸವನು ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕ.ಸಾ.ಪ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ಯವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲಿಯೇ ಸಾಹಿತ್ಯಾಭಿರುಚಿಯನ್ನು ಬೆಳೆಸಿದಾಗ ಸಾಹಿತ್ಯ ಬೆಳೆಯಲು ಸಾಧ್ಯ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಶಿಕ್ಷಕರಾದ ಹರೀಶ್ ಆಚಾರ್ಯರವರು ಉಪನ್ಯಾಸಗೈದು ಯುವ ಪೀಳಿಗೆಯಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ. ನಮ್ಮ ನಾಡು-ನುಡಿ ಸಂಸ್ಕೃತಿ ಉಳಿಯಬೇಕಾದರೆ ಸಾಹಿತ್ಯ ರಚನೆಯಲ್ಲಿ ತೊಡಗಿಕೊಳ್ಳಬೇಕೆಂದು ತಿಳಿಸಿದರು. ಕಡಬ ತಾಲೂಕು ಕ.ಸಾ.ಪ ಸದಸ್ಯರಾದ ರಮೇಶ್ ಕೋಟೆ ಸಂದರ್ಭೋಚಿತವಾಗಿ ಮಾತನಾಡಿದರು.


ಸಾಹಿತ್ಯಾಭಿರುಚಿಯನ್ನು ಬೆಳೆಸಲು ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರಬಂಧ ರಚನೆ, ಶುದ್ಧ ಬರಹ ಹಾಗೂ ಸ್ಪಷ್ಟ ಓದು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕ.ಸಾ.ಪ ದ ವತಿಯಿಂದ ಗೌರವಿಸಲಾಯಿತು. ವೇದಿಕೆಯಲ್ಲಿ ಕ.ಸಾ.ಪ ದ ಸಂಘಟನಾ ಕಾರ್ಯದರ್ಶಿ ನಾಗರಾಜ ಬಿ., ಕಿಶೋರ್ ಕುಮಾರ್ ಬಿ ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಕಡಬ ಇಲ್ಲಿಯ ಉಪಪ್ರಾಂಶುಪಾಲರಾದ ಡಾ. ವೇದಾವತಿ ಸ್ವಾಗತಿಸಿ, ಸಹಶಿಕ್ಷಕಿ ಭವ್ಯಾ ವಂದಿಸಿದರು. ಸಹಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here