ಪುತ್ತೂರಿನ ಎಸ್.ಆರ್.ಕೆ. ಲ್ಯಾಡರ‍್ಸ್ ಮಾಲಕ ಕೇಶವ ಎ ಅವರಿಗೆ ಕುಮಾರ ನಾಯರ್ ಸಾಧನಾ ಪ್ರಶಸ್ತಿ

0

ಪುತ್ತೂರು: ಉದ್ಯಮ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸಾಧನೆಗೆ ಸಂಬಂಧಿಸಿ ಪುತ್ತೂರಿನ ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಎ ಅವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್‌ನಿಂದ ಕೊಡಮಾಡುವ ’ಕುಮಾರ ನಾಯರ್ ಸಾಧನಾ’ ಪ್ರಶಸ್ತಿ ಪುರಸ್ಕೃತಗೊಂಡಿದ್ದಾರೆ.


ನ.11ರಂದು ಕುಮಾರಸ್ವಾಮಿ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕುಮಾರಸ್ವಾಮಿ ವಿದ್ಯಾಲಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್‌ನ ಸಂಚಾಲಕ ಚಂದ್ರಶೇಖರ್ ಎನ್, ಅಧ್ಯಕ್ಷ ಗಣೇಶ್ ಪ್ರಸಾದ್ ಎನ್, ಕುಮಾರಸ್ವಾಮಿ ವಿದ್ಯಾಲಯದ ಪ್ರಾಂಶುಪಾಲ ಶಂಕ್ರೀತ್ ಹೆಬ್ಬಾರ್ ಅವರು ಕೇಶವ ಎ ಅವರಿಗೆ ಪ್ರದಾನ ಮಾಡಿದರು. ಜ್ಞಾನದೀಪ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ತಲ್ಲೂರು, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಭವ್ಯಾ, ನ್ಯಾಯವಾದಿ ಜಯಪ್ರಕಾಶ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹೆಚ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾರತಿ ದಿನೇಶ್ ಸಹಿತ ಹಲವಾರು ಮಂದಿ ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here