ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ – ಕೊಣಾಜೆ ಶಾಲೆಯ ಧನ್ವಿ, ಹರ್ಷಿಣಿ ರಾಜ್ಯಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಮಂಡ್ಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಈ ತಂಡವನ್ನು ಪ್ರತಿನಿಧಿಸಿದ್ದ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
8ನೇ ತರಗತಿ ವಿದ್ಯಾರ್ಥಿನಿ ಧನ್ವಿ ಎಂ., (ಮನೆಜಾಲ್ ದುಗ್ಗಣ್ಣ ಗೌಡ ಮತ್ತು ಅಮಿತರವರ ಪುತ್ರಿ ) ಹಾಗೂ ಹರ್ಷಿಣಿ ( ಮುಚ್ಚಿರೋಡಿ ಲಿಂಗಪ್ಪ ಗೌಡ ಮತ್ತು ಕುಸುಮಾವತಿಯವರ ಪುತ್ರಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಧನ್ವಿ ಎಂ., ಬೆಸ್ಟ್ ಅಲ್‌ರೌಂಡರ್ ಪ್ರಶಸ್ತಿ ಪಡೆದಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ, ಪ್ರಸಾದ್, ಗೌತಮ್, ಸನತ್‌ರವರು ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯ ಶಿಕ್ಷಕರಾದ ರಾಮಕೃಷ್ಣ ಕೆ.,ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here