ಬೆಳ್ಳಿಪ್ಪಾಡಿ:ಆರ್ಥಿಕ ಸಂಕಷ್ಟ- ಪುತ್ತಿಲ ಪರಿವಾರದಿಂದ ಸಹಾಯಾರ್ಥ

0

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕಾಂತಪ್ಪ ಪೂಜಾರಿ ಅವರು ಇತ್ತೀಚಿಗೆ ಅನಾರೋಗ್ಯದಿಂದ ನಿಧನರಾಗಿದ್ದು, ಅವರು ಇಬ್ಬರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತ ಕಾಂತಪ್ಪ ಪೂಜಾರಿ ಮಗ ಮತ್ತು ಮಗಳು ವ್ಯಾಸಂಗ ಮಾಡುತ್ತಿದ್ದು, ಇದರ ನಡುವೆ ಕುಟುಂಬದ ನಿರ್ವಹಣೆ ಕಷ್ಟಕರವಾಗಿದೆ. ಇದನ್ನರಿತ ಬೆಳ್ಳಿಪ್ಪಾಡಿ ಗ್ರಾಮದ ಪುತ್ತಿಲ ಪರಿವಾರದ ಕಾರ್ಯಕರ್ತರು ಈ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತು ಆರ್ಥಿಕ ಸಹಾಯ ಮಾಡಿದ್ದಾರೆ. ಪರಿವಾರದ ಈ ಕಾರ್ಯ ಹೆಗ್ಗಳಿಕೆಗೆ ಪಾತ್ರರಾಗಿದೆ.

LEAVE A REPLY

Please enter your comment!
Please enter your name here