ಎವಿಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಪುತ್ತೂರು: ಬನ್ನೂರು ಕೃಷ್ಣ ನಗರ ಅಲುಂಬುಡ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.15ರಂದು ಮಕ್ಕಳ ದಿನಾಚರಣೆಯು ಆಟೋಟ ಸ್ಪರ್ಧೆಗಳು ನಡೆಯಿತು. ಬಹುಭಾಷಾ ಮಕ್ಕಳ ಸಾಹಿತಿ ಉಲ್ಲಾಸ್ ಕೆ .ಪೈ ಅವರು ಪಾಲ್ಗೊಂಡು ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಶಿಶು ಗೀತೆಗಳನ್ನು ಮಕ್ಕಳಿಗೆ ಅಭಿನಯದ ಮೂಲಕ ಹೇಳಿಕೊಟ್ಟರು. ಎವಿಜಿ ಆಂಗ್ಲ ಮಾಧ್ಯಮ ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳೆಲ್ಲರೂ ಸೇರಿ ಕೇಕ್‌ಕಟ್ ಮಾಡುವ ಮೂಲಕ ಸಂಭ್ರಮಿಸಿದರು. ಎವಿಜಿ ಶಾಲೆಯ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿಯಾದ ಉಷಾ ಕಿರಣ ಕೆ.ಎಸ್ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರಾದ ಗಂಗಾಧರ ಗೌಡ, ಅವಿನಾಶ್ ಕೆ.ಟಿ, ಹಾಗೂ ಪೋಷಕ ವೃಂದದ ವರು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯ ಸಹ ಶಿಕ್ಷಕಿ ಯಶುಭ ರೈ ಹಾಗೂ ಶಾಲೆಯ ಶಿಕ್ಷಕೇತರ ವೃಂದದವರಾದ ಭುವನೇಶ್ವರಿ, ತಿಮ್ಮಪ್ಪ ಗೌಡ ಸಹಕರಿಸಿದರು. ಎವಿಜಿ ಸಂಸ್ಥೆಯ ಉಪಾಧ್ಯಕ್ಷ ಉಮೇಶ್ ಮಳುವೇಲು ವಂದಿಸಿದರು. ಸಹ ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here