ಕಡಬ ಸರಸ್ವತೀ ವಿದ್ಯಾಲಯದಲ್ಲಿ ಕ್ರೀಡೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಡಬ: ಕಡಬದ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಕ್ರೀಡೋತ್ಸವ- 2023, ಡಿ.15ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ದೇವಳದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಕೆದಿಲಾಯ ಅವರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ರವಿರಾಜ ಶೆಟ್ಟಿ, ಕಾರ್ಯದರ್ಶಿ ಎಂ. ವೆಂಕಟ್ರಮಣ ರಾವ್, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೋಮಪ್ಪ ನಾಕ್, ಸೀತಾರಾಮ ಗೌಡ ಎ. ಲಕ್ಷ್ಮೀಶ ಆರಿಗ, ಮಾಧವ ಕೊಲ್ಪೆ, ಪ್ರಮೋದ್ ರೈ ನಂದುಗುರಿ, ಅಜಿತ್ ರೈ ಆರ್ತಿಲ, ಸುವರ್ಣಕುಮಾರ್ ಹಳೆಸ್ಟೇಷನ್, ಯತಿನ್ ಕಲ್ಲುಗುಂಡಿ, ಗಣೇಶ್, ಚಂದನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here