ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ, ನೂತನ ಪ್ರಾಂಶುಪಾಲರಿಗೆ ಸ್ವಾಗತ

0

ನೆಲ್ಯಾಡಿ: ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಹಾಗೂ ನೂತನ ಪ್ರಾಂಶುಪಾಲರಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.


ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ರೆ.ಫಾ.ಸತ್ಯನ್ ತೋಮಸ್ ಒಐಸಿಯವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಹೇಳಿದರು. ಸಂಸ್ಥೆಯ ಸಂಚಾಲಕರಾದ ರೆ.ಫಾ.ಜೈಸನ್ ಸೈಮನ್ ಒಐಸಿಯವರು ನೂತನ ಪ್ರಾಂಶುಪಾಲರಾದ ರೆ.ಫಾ.ವರ್ಗೀಸ್ ಕೈಪನಡ್ಕರವರಿಗೆ ಸ್ವಾಗತ ಕೋರಿ ಪರಿಚಯಿಸಿದರು. ರೆ.ಫಾ.ವರ್ಗೀಸ್ ಕೈಪನಡ್ಕರವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನಿಂದ ವರ್ತಿಸಬೇಕು ಹಾಗೂ ಶಿಕ್ಷಕರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.


ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಗೀತೆಯನ್ನು ಹಾಡಿ ಅಭಿನಂದಿಸಲಾಯಿತು. ರೆ.ಫಾ. ಜೋಬ್ ಒಐಸಿ, ರೆ.ಫಾ.ಜೇಮ್ಸ್, ಉಪಪ್ರಾಂಶುಪಾಲರು, ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here