ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0

ಪುತ್ತೂರು: ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ನ.16ರಂದು ನಡೆಯಿತು. ಕ್ಷೇತ್ರದಲ್ಲಿ ಡಿಸೆಂಬರ್ ತಿಂಗಳ ಕೊನೆಯಲ್ಲಿ ನಡೆಯಲಿರುವ ಬ್ರಹ್ಮಕಲಶದ ಪ್ರಯುಕ್ತ ಬೆಳಿಗ್ಗೆ ಬಾಲಾಲಯ ಪ್ರತಿಷ್ಠೆ ಪೂಜಾ ವಿಧಿವಿಧಾನದೊಂದಿಗೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಮೋನಪ್ಪ ಸಪಲ್ಯ ಅಗೇಲು ಸೇವೆಯನ್ನು ಹಾಗೂ ನಿತಿನ್ ಭಟ್ ದೇವರ ಪೂಜೆಯನ್ನು ನೆರವೇರಿಸಿದರು. ಜಗದೀಶ ಗೌಡ ಸಹಕರಿಸಿದರು. ಅಗೇಲು ಸೇವೆಯು ಪ್ರತೀ ತಿಂಗಳ ಸಂಕ್ರಮಣದಂದು ಜರಗಲಿರುವುದು ಹಾಗೂ ನ.26ರಂದು ಆದಿತ್ಯವಾರ ಮಧ್ಯಾಹ್ನ 1 ಗಂಟೆಗೆ ಅಗೇಲು ಸೇವೆ ಹಾಗೂ ದರ್ಶನ ಸೇವೆ ನಡೆಯಲಿರುವುದು ಎಂದು ದೈವಸ್ಥಾನದ ಮುಖ್ಯಸ್ಥ ದೇವಾನಂದ ಭಟ್ ತಿಳಿಸಿ ಭಕ್ತಾದಿಗಳ ಸಹಕಾರ ಕೋರಿದರು. ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here