ಪುತ್ತೂರು ಸಂಪರ್ಕ ರಸ್ತೆಗೆ ದಿ. ಸುಧಾಕರ ಶೆಟ್ಟಿ ಪುತ್ತೂರು ಹೆಸರಿಡುವಂತೆ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಮನವಿ

0

ಪುತ್ತೂರು: ಪುತ್ತೂರು ಕೆ.ಎಸ್.ಆರ್ ಟಿ. ಸಿ .ಬಸ್ ನಿಲ್ದಾಣದಿಂದ ಖಾಸಗಿ ಬಸ್ ನಿಲ್ದಾಣದ ಸಂಪರ್ಕ ರಸ್ತೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ, ಸಾಮಾಜಿಕ ಮುಂದಾಳು ದಿ.ಸುಧಾಕರ್ ಶೆಟ್ಟಿ ಅವರ ಹೆಸರನ್ನು ಇಡುವಂತೆ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು , ಶಾಸಕರಿಗೆ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.


ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿ ಮತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಅವರ ನೇತೃತ್ವದಲ್ಲಿ ಪ್ರತಿಷ್ಠಾನದ ಉಪಾಧ್ಯಕ್ಷರಾದ ಜಯರಾಮ ಭಂಡಾರಿ ಧರ್ಮಸ್ಥಳ , ಅನಾರು ಕೃಷ್ಣಶರ್ಮ ಮತ್ತು ಪುತ್ತೂರು ಘಟಕದ ಪದಾಧಿಕಾರಿಗಳಾದ ಮಹಾಬಲ ರೈ ಒಳತಡ್ಕ ಚಂದ್ರಶೇಖರ ಆಳ್ವ ಪಡುಮಲೆ, ಭವಾನಿ ಶಂಕರ ಶೆಟ್ಟಿ ಪುತ್ತೂರು ಹಾಗೂ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರಾದ ನ್ಯಾಯವಾದಿ ಜಗನ್ನಿವಾಸ ರಾವ್ ಪುತ್ತೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here