ಕೆಮ್ಮಿಂಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ ಅಧಿಕಾರ ಸ್ವೀಕಾರ

0

ಪುತ್ತೂರು:ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಪೂರ್ಣಗೊಂಡಿರುವ 15 ದೇವಸ್ಥಾನಗಳ ಆಡಳಿತಾಧಿಕಾರಿಗಳ ನೇಮಕಗೊಂಡಿದ್ದು ಕೆಮ್ಮಿಂಜೆ ಶ್ರೀಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ತಾಲೂಕು ಕಚೇರಿ ಚುನಾವಣಾ ಶಾಖೆಯ ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ ನ.16ರಂದು ಅಧಿಕಾರ ಸ್ವಿಕರಿಸಿದರು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಆಡಳಿತಾಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಸದಸ್ಯ ವಿಶ್ವನಾಥ ನಾಯ್ಕ, ಅರ್ಚಕರಾದ ವೆಂಕಟಕೃಷ್ಣ ಭಟ್, ರಮೇಶ್ ಭಟ್, ವ್ಯವಸ್ಥಾಪಕ ಪ್ರಶಾಂತ್, ಸಹಾಯಕ ರಘುನಾಥ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here