ಬೆಂಗಳೂರಿನ ಕಂಬಳ ಸಮಿತಿಯ ವತಿಯಿಂದ ಕೇಶವ ಭಂಡಾರಿ ಕೈಪರಿಗೆ ಸನ್ಮಾನ

0

ಉಪ್ಪಿನಂಗಡಿ: ಕಂಬಳ ಕೋಣಗಳ ಯಜಮಾನ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ ಇವರಿಗೆ ಬೆಂಗಳೂರಿನ ಕಂಬಳ ಸಮಿತಿಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.


ಬೆಂಗಳೂರಿನಲ್ಲಿರುವ ಕಂಬಳ ಸಮಿತಿಯ ಕಚೇರಿಯಲ್ಲಿ ಕೇಶವ ಭಂಡಾರಿ ಅವರನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಸನ್ಮಾನಿಸಿದರು. ಈ ಸಂದರ್ಭ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ್ ಹೊರಟ್ಟಿ, ಶಾಸಕ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಕಂಬಳ ಸಮಿತಿಯ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ, ಕಾರ್ಯಾಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here