ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಎಲ್ಲರೂ ಸೇರಿದ ಕಾರಣ ಕಾರ್ಯಕ್ರಮ ಯಶಸ್ವಿಯಾಗಿದೆ: ಅಶೋಕ್ ರೈ

0

ಪುತ್ತೂರು: ನ.13ರಂದು ರೈ ಎಸ್ಟೇಟಗ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ ಕಾರ್ಯಕ್ರಮ ಯಸಶ್ವಿಯಾಗಲು ಟ್ರಸ್ಟಿನ ಸದಸ್ಯರು ಹಾಗೂ ಕಾರ್ಯಕರ್ತರ ಶ್ರಮವೇ ಕಾರಣವಾಗಿದೆ ಎಂದು ಟ್ರಸ್ಟಿನ ಅಧ್ಯಕ್ಷರೂ ಶಾಸಕ ಅಶೋಕ್ ರೈ ಹೇಳಿದರು.
ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.


ಕಾರ್ಯಕರ್ತರು ಪ್ರತೀ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದು, ಅಚ್ಚುಕಟ್ಟಾದ ವೇದಿಕೆ ವ್ಯವಸ್ಥೆ, ಸಭಾಂಗಣ, ಊಟೋಪಚಾರದ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದ್ದು ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕರು ಹೇಳಿದರು.

ಸ್ಪೀಕರ್ ಗೂ ಅಚ್ಚರಿಯಾಗಿತ್ತು
ಕಾರ್ಯಕ್ರಮದಲ್ಲಿ‌ಭಾಗವಹಿಸಿದ್ದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ರವರು ಕಾರ್ಯಕ್ರಮದಿಂದ ತೆರಳಿದ ಬಳಿಕ ಮೊಬೈಲ್ ಕರೆ ಮಾಡಿ ಇಷ್ಟೊಂದು ಜನ ಸೇರುವ ಕಾರ್ಯಕ್ರಮವಾಗಿದೆ ಎಂಬುದು ನನಗೆ ಗೊತ್ತಿರಲಿಲ್ಲ. ಈ ಕಾರ್ಯಕ್ರಮಕ್ಕೆ ಸಿಎಂ ಅವರನ್ನೇ ಕರೆಸಬೇಕಿತ್ತು. ಅಷ್ಟು ಜನ ಸೇರಿದ್ದರೂ ಎಲ್ಲವೂ ಅಚ್ಚುಕಟ್ಟಾಗಿ ನಡೆದಿರುವುದು ಅದ್ಬುತವಾಗಿದೆ ಎಂದು ನನಗೆ ಹೇಳಿದ್ದರು ಎಂದು ಶಾಸಕರು ಸಭೆಗೆ ತಿಳಿಸಿದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ರವರು ಕೂಡಾ ಕರೆ ಮಾಡಿ ಬಡವರಿಗೆ ಸನ್ಮಾನ ಮಾಡಿರುವುದು ಉತ್ತಮ ಕೆಲಸವಾಗಿದೆ. ಈ ರೀತಿಯ ಕಾರ್ಯಕ್ರಮ ರಾಜ್ಯದಲ್ಲಿ ಎಲ್ಲಿಯೂ ನಡೆಯುವುದಿಲ್ಲ. ರೈ ಟ್ರಸ್ಟ್ ಕಾರ್ಯಕ್ರಮಕ್ಕೆ ಮೊದಲ ಬಾರಿಗೆ ಬಂದಿದ್ದೇನೆ ಅಚ್ಚರಿಯಾಗಿದೆ ಎಂದು ಹೇಳಿ ಅಭಿನಂದಿಸಿದ್ದಾರೆ ಎಂದು ಶಾಸಕರು‌ ಸಭೆಯಲ್ಲಿ‌ಮೆಲುಕು ಹಾಕಿದರು.

ಮುಂದಿನ ವರ್ಷವೂ ಅದ್ದೂರಿ ಕಾರ್ಯಕ್ರಮ
ಮುಂದಿನ ದೀಪಾವಳಿಗೂ ಬಡವರ ಜೊತೆ ಸೇರಿಕೊಂಡು ಅದ್ದೂರಿಯ ಕಾರ್ಯಕ್ರಮ ಮಾಡಲಿದ್ದೇವೆ. ವರ್ಷದಲ್ಲಿ‌ 5ರಿಂದ 6 ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದೆ. ಜನರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದು ಶಾಸಕರು ಹೇಳಿದರು.

ಭಾಗವಹಿಸಿದ ನಾಗರಿಕ ಬಂಧುಗಳಿಗೆ ಅಭಿನಂದನೆಗಳು
ಸೇವಾ ಸೌರಭ ಕಾರ್ಯಕ್ರಮದಲ್ಲಿ‌ 60 ಸಾವಿರಕ್ಕೂ‌ ಮಿಕ್ಕಿ ನಾಗರಿಕ ಬಂಧುಗಳು ಭಾಗವಹಿಸಿ ನಮಗೆ ಆಶೀರ್ವಾದ ಮಾಡಿದ್ದಾರೆ. ಬಡ ಬಂಧುಗಳ ಆಶೀರ್ವಾದವೇ ನಮಗೆ ಶಕ್ತಿಯನ್ನು ಕೊಡಲಿದೆ.‌ಯಾರ‌ ಮನಸ್ಸಿಗೂ ನೋವಾಗದಂತೆ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ಶಾಸಕರು ಹೇಳಿದರು.
ವೇದಿಕೆಯಲ್ಲಿ ಟ್ರಸ್ಟಿನ ಮುಖ್ಯಸ್ಥೆಯಾದ ಸುಮಾ ಅಶೋಕ್ ರೈ, ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ತಿಲು, ಟ್ರಸ್ಟ್ ನ ನಿಹಾಲ್ ಶೆಟ್ಟಿ ಕಲ್ಲಾರೆ, ನಿರಂಜನ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here