ಇಂದು ಕೆಪಿಎಸ್ ಕೆಯ್ಯೂರಿನಲ್ಲಿ ತಾ|ಮಟ್ಟದ ಪ್ರತಿಭಾ ಕಾರಂಜಿ ಕಲಾ ಸಂಗಮ’

0

ಕೆಯ್ಯೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು,ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಕಲಾ ಸಂಗಮ-2023-24′ ನ.20ರಂದು ಕೆಪಿಎಸ್ ಕೆಯ್ಯೂರಿನಲ್ಲಿ ನಡೆಯಲಿದೆ.

ಬೆಳಿಗ್ಗೆ 9.15ಕ್ಕೆ ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಕೆ.ಶರತ್ ಕುಮಾರ್ ಅವರು ಪ್ರತಿಭಾ ಧ್ವಜಾರೋಹಣ ನೆರವೇರಿಸಲಿದ್ದಾರೆ.ಬಳಿಕ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ವಹಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ.

ಹಲವು ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ.ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಎಸ್ ಕೆಯ್ಯೂರಿನ ಕಾರ್ಯಾಧ್ಯಕ್ಷ ಎ.ಕೆ.ಜಯರಾಮ ರೈ ವಹಿಸಲಿದ್ದಾರೆ.ಮಾಜಿ ಶಾಸಕ ಸಂಜೀವ ಮಠಂದೂರು ಬಹುಮಾನ ವಿತರಿಸಲಿದ್ದಾರೆ.ಹಲವು ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here