ಪುತ್ತೂರು: ಡಿ.7ರಂದು ಅಂಚೆ ಅದಾಲತ್

0

ಪುತ್ತೂರು: ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಡಿ.7ರಂದು ಬೆಳಿಗ್ಗೆ ಗಂಟೆ 11.30ಕ್ಕೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಿಲಿದೆ.

ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆ, ತಕರಾರುಗಳನ್ನು ಪರಿಶೀಲಿಸಲಾಗುವುದು. ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಡಿ.7ರ ಒಳಗೆ ಹಿರಿಯ ಅಂಚೆ ಅಧೀಕ್ಷಕರು , ಪುತ್ತೂರು ವಿಭಾಗ , ಪುತ್ತೂರು -574201, ವಿಳಾಸಕ್ಕೆ ದೂರುಗಳನ್ನು ಕಳುಹಿಸಬಹುದು , ಹಾಗೆಯೇ ಅದೇ ದಿನ ಗಂಟೆ 11.30 ರ ಒಳಗೆ ದೂರವಾಣಿ ಸಂಖ್ಯೆ 08251-230201, 230295ಕ್ಕೆ ನೇರವಾಗಿಯೂ ಸಂಪರ್ಕಿಸಬಹುದು. ತಮ್ಮ ದೂರುಗಳನ್ನು ಮಿಂಚಂಚೆ [email protected]   ಮೂಲಕ ಅದಾಲತ್ತಿಗೆ ಮೊದಲು ತಲುಪುವಂತೆ ಕಳುಹಿಸುವುದು. ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಂಚೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here