ಕಬಡ್ಡಿ – ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ, ಉಪನಿರ್ದೇಶಕರ ಕಚೇರಿ ಮಂಡ್ಯ, ಹಾಗೂ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ಅರಸಿನಕೆರೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿಗಳಾದ ದೀಕ್ಷಾ ಎಸ್ ಹಾಗೂ ವಿಜೇತ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ದೀಕ್ಷಾ ಎಸ್ ಇವಳು ಶಿವಪ್ರಸಾದ್ ಎ ಹಾಗೂ ಅನುಪಮ ಇವರ ಸುಪುತ್ರಿವಿಜೇತ ಇವಳು ಕೆ ಜಯರಾಮ ಕುಲಾಲ್ ಹಾಗೂ ಚೈತ್ರ ಇವರ ಸುಪುತ್ರಿ ಇವರಿಗೆ ಹಬೀಬ್ ಮಾಣಿ, ಲಿಟಲ್ ಫ್ಲವರ್ ಪ್ರೌಢಶಾಲೆಯ ಶಿಕ್ಷಕ ಬಾಲಕೃಷ್ಣ ಪೋದ್ವಾಲ್ , ಹಾಗೂ ಸಂತ ಫಿಲೋಮಿನಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here