ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

0

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ, ಯುವ ರೆಡ್ ಕ್ರಾಸ್ ಘಟಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ, ವಿಟ್ಠಲ ಸುಪ್ರಜಿತ್ ಐಟಿಐ ವಿಟ್ಲ, ಸರಕಾರಿ ಐಟಿಐ ವಿಟ್ಲ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮಂಗಳೂರು ಮತ್ತು ಪುತ್ತೂರು ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.


ಲಯನ್ಸ್ ಕ್ಲಬ್ ನ ಜಿಲ್ಲಾ ಮಾಜಿ ಗವರ್ನರ್ ಡಾ. ಗೀತಪ್ರಕಾಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪದ್ಮನಾಭ ರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಶೆಟ್ಟಿ, ಡಾ. ಪ್ರತ್ಯುಷ್, ಚಂದ್ರಹಾಸ ಪಿ., ಅಶ್ರಫ್ ವಿ ಕೆ ಯಂ, ಅಬ್ದುಲ್ ಕರೀಂ, ಮೋನಪ್ಪ ಗೌಡ , ಜಲಜಾಕ್ಷಿ ಬಾಲಕೃಷ್ಣ, ಪುಷ್ಪಲತಾ, ರಮೇಶ್ ರೈ, ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು.
ಶಶಿಕಲಾ ಸ್ವಾಗತಿಸಿ, ಎನ್.ಡಿ. ನಾಗರಾಜ್ ವಂದಿಸಿದರು. ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. 65 ಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here