ಶಾಸಕ ಶ್ರೀಮಂತರ್ ಗೌಡರಿಗೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದ ಆಮಂತ್ರಣ

0

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಶಾಸಕ ಶ್ರೀಮಂತರ್ ಗೌಡ ಅವರನ್ನು ಅವರ ಸೋಮವಾರಪೇಟೆಯ ಮನೆಯಲ್ಲಿ ಭೇಟಿಯಾಗಿ ಆಮಂತ್ರಣ ನೀಡಲಾಯಿತು.


ಸಂಘ ಕೈಗೊಂಡ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಮಂತರ್ ಗೌಡ ಅವರು, ಮುಂದಿನ ಕೆಲಸಗಳಿಗೆ ಸಂಪೂರ್ಣ ಸಹಕಾರ ಹಾಗೂ ಬೆಂಬಲದ ಭರವಸೆ ನೀಡಿದರು.
ಈ ಸಂದರ್ಭ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಮಂಗಳೂರು ತಾಲೂಕು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷರೂ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷರೂ ಆದ ಕಿರಣ್ ಬುಡ್ಲೆಗುತ್ತು, ಯುವ ಉದ್ಯಮಿ ಶ್ರೀಕಾಂತ್ ಮಾವಿನಕಟ್ಟೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here