ಅರಿಯಡ್ಕ: ಸಂಜೀವಿನಿ ಸಂತೆ ಉದ್ಘಾಟನೆ

0

ಪುತ್ತೂರು: ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಸಂಜೀವಿನಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಗ್ರಾಮ ಪಂಚಾಯತ್ ಅರಿಯಡ್ಕ ಹಾಗೂ ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿ, ಮೂಲಕ ಸಂಜೀವಿನಿ ಗ್ರಾಮೀಣ ಸಂತೆಯನ್ನು ನ.20 ರಂದು ಕೌಡಿಚ್ಚಾರು ನಲ್ಲಿ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.


ಸ್ಥಳೀಯ ತರಕಾರಿಗಳನ್ನು, ಮನೆಯಲ್ಲಿ ತಯಾರಿಸಿದ ವಿವಿಧ ಬೇಕರಿ ತಿನಿಸುಗಳನ್ನು ಮಾರಾಟ ಮಾಡಲಾಯಿತು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಪಂಚಾಯತ್ ಸದಸ್ಯರು, ಪಂಚಾಯತ್ ಪಿ.ಡಿ.ಓ ಮತ್ತು ಸಿಬ್ಬಂದಿಗಳು,ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.ಅರಿಯಡ್ಕ ಎಂ.ಬಿ.ಕೆ ಚೈತ್ರ,ಎಲ್.ಸಿ.ಆರ್.ಪಿ ಗಳಾದ ನಯನಾ ಮತ್ತು ವಿದ್ಯಾಶ್ರೀ ಸಹಕರಿಸಿದರು.

LEAVE A REPLY

Please enter your comment!
Please enter your name here