ಬೆಂಗಳೂರು ಕಂಬಳ : ಅಶೋಕ್ ರೈ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿಗಳ ಸಭೆ

0

ಬೆಂಗಳೂರು: ನ. 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ – ನಮ್ಮ ಕಂಬಳ’ದ ಅಂತಿಮ ಸಿದ್ದತೆಗಳ ಕುರಿತು ವಿವಿಧ ಸಮಿತಿಗಳ ಜೊತೆ ಪೂರ್ವಭಾವಿ ಸಭೆಯು ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈಯವರ ಅಧ್ಯಕ್ಷತೆಯಲ್ಲಿ ನ. 21 ರಂದು ನಡೆಯಿತು.

ಅರಮನೆ ಮೈದಾನದಲ್ಲಿ ವಿಶೇಷವಾಗಿ ನಿರ್ಮಿಸಲಾಗಿರುವ ಕಂಬಳ ಸಮಿತಿಯ ಕಚೇರಿಯ ಸಭಾಂಗಣದಲ್ಲಿ ಈ ಸಭೆ ನಡೆಯಿತು.  ವೈದ್ಯಕೀಯ ಸೇವೆಗಳ ಕುರಿತಾಗಿ ವೈದ್ಯಕೀಯ ಸಮಿತಿ, ಕಾನೂನು ವಿಚಾರಗಳ ಕುರಿತಾಗಿ ವಕೀಲರ ಸಮಿತಿ ಸೇರಿದಂತೆ ಹಲವು ಸಮಿತಿಗಳ ಪ್ರಮುಖರು, ಕಾರ್ಯಕರ್ತರೊಂದಿಗೆ ಅಶೋಕ್ ರೈಯವರು ಸಮಾಲೋಚನೆ ನಡೆಸಿದರು. ಈ ವೇಳೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಸೇರಿದಂತೆ ವಿವಿಧ ಸಮಿತಿಗಳ ಪ್ರಮುಖರು ಪಾಲ್ಗೊಂಡರು.

LEAVE A REPLY

Please enter your comment!
Please enter your name here