
ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ರಸ್ತೆ ಬದಿಯಲ್ಲಿ ಬೆಳೆದಿರುವ ಕಾಡುಪೊದೆಗಳು ರಸ್ತೆಗಳನ್ನು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಸದ್ಯ ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾರಾಡಿ ಬನ್ನೂರು, ಪಡೀಲ್ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ವಾಹನ ಸಂಚಾರರಿಗೆ ಮತ್ತು ಪಾದಚಾರಿಗಳಿಗೆ ಪೊದೆಗಳಿಂದಾಗಿ ತೊಂದರೆ ಆಗುತ್ತಿದೆ.