ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ‌ ಮಹೋತ್ಸವದ ಆಮಂತ್ರಣ ಬಿಡುಗಡೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ (ವಲ್ಮೀಕ) ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.17ರಂದು ನಡೆಯುವ ವಿಶೇಷ ಕಾರ್ತಿಕ ಪೂಜೆ ಹಾಗೂ ಡಿ.18ರಂದು ನಡೆಯುವ ಚಂಪಾ ಷಷ್ಠಿ ಮಹೋತ್ಸವ ಹಾಗೂ ಕಟೀಲು ಮೇಳದ ಶ್ರೀದೇವಿಮಹಾತ್ಮೆ ಯಕ್ಷಗಾನದ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಅರ್ಚಕ ರಘುರಾಮ ಮೂಡೆತ್ತಾಯ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ,ಮೊಕ್ತೇಸರರಾದ ಮೋಹನ್ ದಾಸ್ ರೈ, ಸತೀಶ್ ರೈ, ಅರುಣ್ ಕುಮಾರ್ ರೈ, ಪ್ರವೀಣ್ ಕುಮಾರ್ ರೈ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸುರೇಶ್ಚಂದ್ರ ರೈ, ಸಮಿತಿ ಸದಸ್ಯ ಪ್ರವೀಣ್ ರೈ ನಡುಕೂಟೇಲು, ಜಗದೀಶ್ ಕರ್ಕೇರ  ಮುರ್ಕೆತ್ತಿ, ಸುಧಾಕರ ರೈ ಪಾಲ್ತಾಡಿ ಹೊಸಮನೆ, ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here