ಮುಂದಿನ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲರನ್ನು ಗೆಲ್ಲಿಸೋಣ – ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ

0

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಮಂಗಳೂರು ಕ್ಷೇತ್ರಕ್ಕೆ ಭಾಜಪದಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ. ವೈ ವಿಜಯೇಂದ್ರ ಮುಂದಿನ ಚುನಾವಣೆಯಲ್ಲಿ ನಳಿನ್ ಕುಮಾ‌ರ್ ಕಟೀಲರನ್ನು ಗೆಲ್ಲಿಸೋಣ ಎಂದು ಹೇಳುವ ಮೂಲಕ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ಪೂರ್ಣ ವಿರಾಮ ಹಾಕಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ ಅವರು ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟೋಣ. ಮುಂಬರುವ ತಾಲೂಕು ಪಂಚಾಯತ್‌ , ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಅತ್ಯಧಿಕ ಸಂಖ್ಯೆಯಲ್ಲಿ ಗೆಲ್ಲುವಂತಾಗಬೇಕು. ಮಾತ್ರವಲ್ಲದೆ ಮುಂದಿನ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಕೆಲಸ ಮಾಡೋಣ ಎಂದು ಕರೆ ನೀಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಬದಲಾಗುತ್ತಾರಾ? ಎಂಬ ಪ್ರಶ್ನೆಗೆ ನೂತನ ರಾಜ್ಯಾಧ್ಯಕ್ಷರು ಪರೋಕ್ಷವಾಗಿ ಉತ್ತರ ನೀಡಿದ್ದು , ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

LEAVE A REPLY

Please enter your comment!
Please enter your name here