ಬೆಳಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ರಂಗ ತರಬೇತಿ ಶಿಬಿರ

0

ಕಾಣಿಯೂರು: ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ವಿಭಾಗದ ನೇತೃತ್ವದಲ್ಲಿ ನ.22ರಂದು ರಂಗ ತರಬೇತಿ ಶಿಬಿರ ವನ್ನು ನಡೆಸಲಾಯಿತು. ಸಭಾ ಕಾರ್ಯಕ್ರಮದ ಆಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಶಂಕರ ಭಟ್.ಪಿ ವಹಿಸಿದ್ದರು. ಶಿಬಿರದ ತರಬೇತುದಾರರಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಯೂ, ರಂಗ ತರಬೇತುದಾರ ರಾಕೇಶ್ ಆಚಾರ್ಯ ಬನಾರಿ ಭಾಗವಹಿಸಿ ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವ ಮತ್ತು ಕಲೆಯೂ ಹೇಗೆ ವ್ಯಕ್ತಿತ್ವದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದನ್ನು ತಿಳಿಸಿ ಶಿಬಿರಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಐಕ್ಯುಎಸಿ ಸಂಚಾಲಕ ಸ್ವಾಮಿ.ಎಸ್ , ಸಾಂಸ್ಕೃತಿಕ ಸಮಿತಿ ಸಂಚಾಲಕಿ ದೀಪ್ತಿ ಎ.ಸಿ ಹಾಗೂ ಕನ್ನಡ ವಿಭಾಗದ ಉಪನ್ಯಾಸಕರಾದ ರಶ್ಮಿ.ಕೆ ಉಪಸ್ಥಿತರಿದ್ದರು. ಚಂದ್ರಿಕ ದ್ವಿತೀಯ ಬಿ.ಬಿ.ಎ ಕಾರ್ಯಕ್ರಮ ನಿರೂಪಿಸಿ, ರಶ್ಮಿ.ಕೆ ಪ್ರಾಸ್ತವಿಕ ನುಡಿಗಳನ್ನಾಡಿದರು. ಸಚಿನ್ ತೃತೀಯ ಬಿಕಾಂ ಸ್ವಾಗತಿಸಿದರು. ಭವನ್ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಕೀರ್ತನ ತೃತೀಯ ಬಿ.ಎ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನೀಡಲಾಯಿತು.

LEAVE A REPLY

Please enter your comment!
Please enter your name here