ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಪ್ರತಿಭೆಗಳಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ

0

ಪುತ್ತೂರು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕೇರಳ ಇದರ ವತಿಯಿಂದ ಉಪ್ಪಳ ಬಾಯಾರುಪದವು ಪ್ರಶಾಂತಿ ವಿದ್ಯಾ ಕೇಂದ್ರ ಸಭಾಂಗಣದಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನ್ವಿ ರೈ ಕೋಟೆ ಮತ್ತು ತನ್ವಿ ಶೆಟ್ಟಿ ಸೂರಂಬೈಲು ಇಬರನ್ನು ಭಾರತ ಸರಕಾರದ ಮಾಜಿ ಸಚಿವ ಹಾಗೂ ಲೋಕಸಭಾ ಸದಸ್ಯ ರಮೇಶ ಚಂದಪ್ಪ ಜಿಗಜಿನಗಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇದರ ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಅಧ್ಯಕ್ಷ ಚನಿಯಪ್ಪ ನಾಯ್ಕ, ಸಾದ್ವಿ ಮಾತಾನಂದಮಯಿ ಒಡಿಯೂರು, ಸಂಸ್ಥಾಪಕ ಎಸ್ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here