ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

0

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳರವರು ನ.24 ರಂದು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವರ ಗೌರವ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮುಜರಾಯಿ , ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ವ್ಯವಸ್ಥಾಪನಾ ಸಮಿತಿಯ ದಾಮೋದರ ರೈ ತೊಟ್ಲ, ದೇವಯ್ಯ ಗೌಡ ದೇವಸ್ಯ, ವಿಠಲ ರೈ ಮೇರ್ಲ, ಭಾರತಿ ಶಾಂತಪ್ಪ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳ ತಡ್ಡ, ಗೌರವ ಸಲಹೆಗಾರ, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೂರೇಲು ಸದಾನಂದ ಶೆಟ್ಟಿ, ಪಂಚಾಯತ್ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಹರೀಶ್ ನಾಯಕ್ ಬಳಕ್ಕ, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲ್, ಕೂರೇಲು ತಿಮ್ಮಪ್ಪ ಗೌಡ, ನಿತಿನ್ ಪಕ್ಕಳ ದರ್ಬೆ ಬೀರಮಲೆ, ಪನಡ್ಕ ಚಂದ್ರಹಾಸ ರೈ , ಹರೀಶ್ ಪೂಜಾರಿ ಕಾರ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here