ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್- ಉಚಿತ ಪ್ರವೇಶ ಪರೀಕ್ಷಾ ತರಬೇತಿಗೆ ಅರ್ಜಿ ಅಹ್ವಾನ

0

ಎಫ್.ಡಿ.ಎ/ಎಸ್.ಡಿ.ಎ/ಪಿಡಿಒ/ಪಿ.ಎಸ್.ಐ/ಪಿಸಿ ಹುದ್ದೆಗಳಿಗೆ ಶೀಘ್ರದಲ್ಲೆ ನೇಮಕಾತಿ

ಪುತ್ತೂರು:ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್. ಕರ್ನಾಟಕ ಎಜ್ಯುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಸರ್ಕಾರ ಸದ್ಯದಲ್ಲೇ ನೇಮಕಾತಿ ನಡೆಸಲಿರುವ ಎಫ್.ಡಿ.ಎ/ಎಸ್.ಡಿ.ಎ/ಪಿಡಿಒ/ಪಂಚಾಯತ್ ಕಾರ್ಯದರ್ಶಿ/ದ್ವಿತೀಯ ದರ್ಜೆ ಎಕೌಂಟ್ ಅಸಿಸ್ಟೆಂಟ್ ಇತ್ಯಾದಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.


ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಕಂಪ್ಯೂಟರ್ ಕೋರ್ಸುಗಳು, ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಇತರೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ನುರಿತ ತರಬೇತುದಾರರಿಂದ ತರಬೇತಿ ನಡೆಯುತ್ತಿದೆ.


ಅರ್ಜಿ ಸಲ್ಲಿಸಲು 30-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತ ಸ್ಪರ್ಧಾರ್ಥಿಗಳು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 30-11-2023 ರ ಒಳಗೆ ಅರ್ಜಿ ಸಲ್ಲಿಸಬೇಕು. (ಸೀಮಿತ ದಾಖಲಾತಿಗಳು ಮಾತ್ರ).
ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್‌ನ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.

LEAVE A REPLY

Please enter your comment!
Please enter your name here