ಕರ್ನಾಟಕ ಕಬಡ್ಡಿ ತಂಡದ ತರಬೇತುದಾರರಾಗಿ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಆಯ್ಕೆ

0

ಪುತ್ತೂರು: ಪ್ರಾಥಮಿಕ ಶಾಲಾ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದ ಕರ್ನಾಟಕ ರಾಜ್ಯ ತಂಡದ ತರಬೇತುದಾರಾಗಿ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬೆಟ್ಟಂಪಾಡಿಯ ಪೊರ್ದಾಳ್ ನಿವಾಸಿ ಬಾಲಕೃಷ್ಣ ರೈ ಆಯ್ಕೆಯಾಗಿದ್ದಾರೆ.


ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ 14 ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ನೇತೃತ್ವದ ತಂಡ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ಜ.28ರಂದು ಆಂದ್ರಪ್ರದೇಶದ ಕಡಪ ಜಿಲ್ಲೆಯ ರಾಜ್ಯಪೇಟೆಯಲ್ಲಿ ನಡೆಯಲಿದೆ. ಶಿಕ್ಷಕ ಬಾಲಕೃಷ್ಣ ರೈಯವರ ನೇತೃತ್ವದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಓರ್ವ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಹಾಗೂ ನಾಲ್ವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದರು. ಈ ಸಾಲಿನಲ್ಲಿ ಶಾಲೆಯ ಪೂರ್ಣ ಪ್ರಮಾಣದ ತಂಡವು ಮೈಸೂರು ವಿಭಾಗ ಮಟ್ಟ, ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here