ಎಸ್.ಆರ್.ಕೆ.ಲ್ಯಾಡರ‍್ಸ್‌ಗೆ ಬೆಳ್ಳಿಹಬ್ಬದ ಸಂಭ್ರಮ – ನ.28ಕ್ಕೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

0

ಪುತ್ತೂರು: ಎಸ್.ಆರ್.ಕೆ.ಲ್ಯಾಡರ‍್ಸ್ ಇದರ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮತ್ತು ಲೋಗೋ ಅನಾವರಣ ಸಮಾರಂಭ ನ.28ರಂದು ಮುಕ್ರಂಪಾಡಿಯಲ್ಲಿರುವ ಎಸ್.ಆರ್.ಕೆ.ಲ್ಯಾಡರ‍್ಸ್ ಆವರಣದಲ್ಲಿ ನಡೆಯಲಿದೆ.
ಸಹಾಯಕ ಕಮೀಷನರ್ ಗಿರೀಶ್‌ ನಂದನ್ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಅವರು ಲೋಗೋ ಅನಾವರಣ ಮಾಡಲಿದ್ದಾರೆ. ರೋಟರಿಕ್ಲಬ್ ಅಧ್ಯಕ್ಷ ಜೈರಾಜ್ ಭಂಡಾರಿ, ಆಕರ್ಷಣ್ ಇಂಡಸ್ಟ್ರೀಸ್‌ನ ಸಾದಿಕ್ ಕುಂಬ್ರ, ಶ್ರೀ ಮಹಾಲಿಂಗೇಶ್ವರ ಐಟಿಐಯ ಪ್ರಾಂಶುಪಾಲ ಪ್ರಕಾಶ್ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಕೇಶವ ಎ ಅವರು ತಿಳಿಸಿದ್ದಾರೆ.

ರಕ್ತದಾನ ಶಿಬಿರ:
ಎಸ್‌ಆರ್‌ಕೆ ಲ್ಯಾಡರ‍್ಸ್ ಇದರ ಬೆಳ್ಳಿಹಬ್ಬದ ಸಂಭ್ರಮದಲ್ಲಿ ವರ್ಷಪೂರ್ತಿ ವಿವಿಧ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇಟ್ಟು ಕೊಂಡಿದ್ದು, ಆರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ಐಟಿಐ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ ಎಂದು ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲಕ ಕೇಶವ ಎ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here