14ರ ವಯೋಮಾನದ ಬಾಲಕಿಯರ ಕರ್ನಾಟಕ ಕಬಡ್ಡಿ ತಂಡದ ತರಬೇತುದಾರರಾಗಿ ಆಯ್ಕೆಗೊಂಡಿರುವ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್‌ರವರಿಗೆ ಈಶ್ವರಮಂಗಲದಲ್ಲಿ ಸನ್ಮಾನ

0

ಪುತ್ತೂರು: 14ರ ವಯೋಮಾನದ ಬಾಲಕಿಯರ ಕರ್ನಾಟಕ ಕಬಡ್ಡಿ ತಂಡದ ತರಬೇತುದಾರರಾಗಿ ಆಯ್ಕೆಗೊಂಡಿರುವ ಪುತ್ತೂರು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಅವರನ್ನು ನ.27ರಂದು ಈಶ್ವರಮಂಗಲದಲ್ಲಿ ನಡೆದ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘದ ನೂತನ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಚಿವ ರಮಾನಾಥ ರೈ ಅವರು ಶಾಲು ಹಾಕಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಸಂಘದ ಅಧ್ಯಕ್ಷ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here