ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸಾಂದೀಪನಿಯ ಭುವನ್ ಕರಂದ್ಲಾಜೆಗೆ ಚಿನ್ನದ ಪದಕ

0

ಕಾಣಿಯೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೊರಗಪ್ಪ ಹಾಲ್ ನಲ್ಲಿ ನ 26 ರಂದು ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿ ಭುವನ್ ಕರಂದ್ಲಾಜೆ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದಿರುತ್ತಾರೆ.

ಇವರು ಶ್ರೀ ಲಕ್ಷ್ಮಣ ಕರಂದ್ಲಾಜೆ ಹಾಗೂ ಶ್ರೀಮತಿ ಸುಪ್ರೀತಾ ಲಕ್ಷ್ಮಣ ಕರಂದ್ಲಾಜೆ ಇವರ ಪುತ್ರ. ಇವರಿಗೆ ಕರಾಟೆ ಮುಖ್ಯ ಶಿಕ್ಷಕ ಟಿ. ಡಿ ತೋಮಸ್ ಮಾರ್ಗದರ್ಶನದಲ್ಲಿ ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿರವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here