ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿ ಕಾರ್ಯಕ್ರಮ

0

ಅನುವಾದ ಮಾಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು – ಜಯಪ್ರಕಾಶ್ ಪುತ್ತೂರು

ಪುತ್ತೂರು: ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ಅದ್ವಯ ಕನ್ನಡ ಸಂಘ, ರೋಟರಾಕ್ಟ್ ಕ್ಲಬ್ ಅಕ್ಷಯ ಕಾಲೇಜ್ ಸಹಯೋಗದೊಂದಿಗೆ ಹಿರಿಯ ಸಾಹಿತಿಗಳಾದ ಜಯಪ್ರಕಾಶ್ ಪುತ್ತೂರು ಅವರು “ಅನುವಾದ ಸಾಹಿತ್ಯ” ವಿಷಯದಲ್ಲಿ ಉಪನ್ಯಾಸ ಕಾರ್ಯಕ್ರಮ ನ.24ರಂದು ನೀಡಿದರು. ಭಾರತದ ಮಾಜಿ ರಾಷ್ಟ್ರಪತಿಗಳಾದ ಡಾ ಅಬ್ದುಲ್ ಕಲಾಮ್ ಅವರು ರಚಿಸಿದ “ವಿಂಗ್ಸ್ ಒಫ್ ಫೈರ್” ಕೃತಿಯನ್ನು “ಅಗ್ನಿಯ ರೆಕ್ಕೆಗಳು” ಎಂಬ ಹೆಸರಿನಿಂದ ಕನ್ನಡಕ್ಕೆ ಅನುವಾದ ಮಾಡಿದ ರೋಚಕ ಅನುಭವಗಳನ್ನು ಹಾಗೂ ಅನುವಾದ ಮಾಡುವ ಸಂದರ್ಭದಲ್ಲಿ ಅನೇಕ ವಿಚಾರಗಳಲ್ಲಿ ಎಚ್ಚರಿಕೆಯನ್ನು ವಹಿಸ ಬೇಕಾಗುತ್ತದೆ ಎಂದು ತಿಳಿಸಿ ಯಾವೆಲ್ಲ ನಿಯಮಗಳನ್ನು ಪಾಲಿಸಬೇಕೆಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಜಯಪ್ರಕಾಶ್ ಪುತ್ತೂರು ಅವರನ್ನು ಸಾಹಿತ್ಯ ಪರಿಷತ್ ವತಿಯಿಂದ ಗೌರವಿಸಲಾಯಿತು.ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕ ಜಯಂತ ನಡು ಬೈಲು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ವರದರಾಜ ಚಂದ್ರಗಿರಿ ಅವರು 2015ರಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ ಸಮಯದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇಲ್ಲಿ ದತ್ತಿ ನಿಧಿ ಯನ್ನು ಸ್ಥಾಪಿಸಿದ್ದು, ಈ ದತ್ತಿ ನಿಧಿ ಪ್ರಕಾರ ಪ್ರತಿ ವರ್ಷವೂ ಪುತ್ತೂರು ತಾಲೂಕಿನ ಯಾವುದೇ ಸ್ಥಳದಲ್ಲಿ ಸಾಹಿತ್ಯ ಸಂಬಂಧಿತ, ಸಮಕಾಲಿನ ಸಾಹಿತ್ಯ ವಿಷಯದಲ್ಲಿ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ.

ಪುತ್ತೂರು ಉಮೇಶ್ ನಾಯಕ್ ಅವರು ಸಭಾಧ್ಯಕ್ಷತೆಯನ್ನು ವಹಿಸಿ ಸಂದರ್ಭೋಚೀತವಾಗಿ ಮಾತಾಡಿದರು ಅದ್ವಯ ಕನ್ನಡ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು.ರೋಟರಾಕ್ಟ್ ಕ್ಲಬ್ಬಿನ ಸಭಾಪತಿ ರತ್ನಾಕರ ರೈ, ಸಂಯೋಜಕ ರಾಕೇಶ್, ಅಧ್ಯಕ್ಷ ಸತ್ಯನಾರಾಯಣ ನಾಯಕ್, ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು..ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷ ಪಶುಪತಿ ಶರ್ಮ ಸ್ವಾಗತಿಸಿ, ವಿದ್ಯಾರ್ಥಿ ಉಜ್ವಲ್ ನಾಯಕ್ ವಂದಿಸಿ, ಕೀರ್ತನ ಕಾರ್ಯಕ್ರಮ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here