ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರಿಂದ ಈಶ್ವರಮಂಗಲ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘದ ಮೊಬೈಲ್ ಬ್ಯಾಂಕಿಂಗ್ ಲೋಕಾರ್ಪಣೆ

0

ಪುತ್ತೂರು: ನ.27ರಂದು ಈಶ್ವರಮಂಗಲದಲ್ಲಿ ಉದ್ಘಾಟನೆಗೊಂಡ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘದ ಮೊಬೈಲ್ ಬ್ಯಾಂಕಿಂಗ್‌ನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ಧೋದ್ಧೇಶ ಸಹಕಾರ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಮೂರು ಬಾರಿ ಪ್ರಶಸ್ತಿ ದೊರಕಿದ್ದು ಮುಂದಕ್ಕೆ ಇದರ ಶಾಖೆಗಳು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಆರಂಭವಾಗುವಂತಾಗಲಿ ಎಂದು ಹೇಳಿದರು.ಮಾಜಿ ಸಚಿವ ರಮಾನಾಥ ರೈ, ಸಂಘದ ಅಧ್ಯಕ್ಷ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಮತ್ತು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here