ರೆಂಜಲಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಆಟೋಟ ಸ್ಪರ್ಧೆ

0

ಪುತ್ತೂರು: ರೆಂಜಲಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನಡೆಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ, ಮಕ್ಕಳ ತಾಯಂದಿರು, ಶ್ರೀದೇವಿ ಹಾಗೂ ಶ್ರೀದುರ್ಗ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಹಾಗೂ ಊರವರಿಗೆ ಕೆಲವು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಚೈತ್ರಾ ಮಧುಚಂದ್ರ ಅವರು ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮಹಿಳೆಯರಿಗೆ ಸಂಘದ ಸದಸ್ಯರಾದ ಲಲಿತಾ ನೆಕ್ಕಿಲು ಹಾಗೂ ಅಕ್ಕಯ್ಯ ಅವರು ಬಹುಮಾನ ವಿತರಿಸಿದರು. ಇದೇ ಸಂದರ್ಭದಲ್ಲಿ ಶ್ರೀದುರ್ಗ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಅಂಗನವಾಡಿ ಕೇಂದ್ರಕ್ಕೆ ಟೀಪಾಯಿಯನ್ನು ಕೊಡುಗೆಯಾಗಿ ನೀಡಿದರು.

ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪುಷ್ಪಾವತಿ ಸ್ವಾಗತಿಸಿ ವಂದಿಸಿದರು. ಅಂಗನವಾಡಿ ಕೇಂದ್ರದ ಸಹಾಯಕಿ ಭವಾನಿ ಸಹಕರಿಸಿದರು.

LEAVE A REPLY

Please enter your comment!
Please enter your name here