’ಯುವಶಕ್ತಿ ಟ್ರೋಪಿ -2023’ ಕಬಡ್ಡಿ ಪಂದ್ಯಾಟ-ರಾಮಕುಂಜ ಕ.ಮಾ.ಪ್ರೌಢಶಾಲಾ ಬಾಲಕರ ತಂಡ ಪ್ರಥಮ

0

ರಾಮಕುಂಜ: ಅನ್ನಪೂರ್ಣೇಶ್ವರಿ ಭಜನಾ ಮಂದಿರ ನೆಹರುನಗರ ಪಡ್ಡಾಯೂರು ಪುತ್ತೂರು ಇವರ ವತಿಯಿಂದ ನಡೆದ ದ್ವಿತೀಯ ವರ್ಷದ ಪ್ರೌಢಶಾಲೆ ವಿಭಾಗದ 30 ತಂಡಗಳ ’ಯುವಶಕ್ತಿ ಟ್ರೋಪಿ-2023’ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದಿದೆ.


ತಂಡದ ನಾಯಕ ಕಾರ್ತಿಕ್ ಬೆಸ್ಟ್ ಆಲ್‌ರೌಂಡರ್ ಹಾಗೂ ಪ್ರೀತಮ್ ಬೆಸ್ಟ್ ಕ್ಯಾಚರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಸತ್ಯ, ಶ್ರೇಯಸ್, ಹಿತೇಶ್, ನಿತೇಶ್ ಗೌಡ, ಯಶವಂತ, ಮೌನೇಶ್, ದಿಲೀಪ್, ಮಹಮ್ಮದ್ ರೈಜ್, ಕೃತಿಕ್, ನಿಖಿಲ್ ಎನ್.ಡಿ, ಸಂನ್ವಿತ್ ತಂಡವನ್ನು ಪ್ರತಿನಿಧಿಸಿದ್ದರು. ತಂಡಕ್ಕೆ ಮಾಧವ ಬಿ.ಕೆ, ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಗುರುಗಳಾದ ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ, ಆಡಳಿತ ಮಂಡಳಿಯವರು ಹಾಗೂ ಪೋಷಕರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here