ಗೋಮಾಳ ಜಮೀನಿನಲ್ಲಿರುವ ಅಕ್ರಮ ತೆರವುಗೊಳಿಸಲು ಆಗ್ರಹ:ಗೋಮಾಳ ಸಂರಕ್ಷಣಾ ಸಮಿತಿ ಕೆದಿಲ – ಪೆರಾಜೆ ವತಿಯಿಂದ ಬಂಟ್ವಾಳ ಉಪ ತಹಶಿಲ್ದಾರ್ ಅವರಿಗೆ ಮನವಿ

0

ವಿಟ್ಲ: ಕೆದಿಲ ಮತ್ತು ಪೆರಾಜೆ ಗ್ರಾಮಗಳ ಗೋಮಾಳದ ಜಮೀನಿನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವುದು ಮತ್ತು ಗಡಿ ಗುರುತು ನಡೆಸಿ ,ಸಂರಕ್ಷಿಸಿ ಉದ್ದೇಶಿತ ಕಾರ್ಯಕ್ಕೆ ಬಳಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಇದರ ಸಹಯೋಗದಲ್ಲಿ ಗೋಮಾಳ ಸಂರಕ್ಷಣಾ ಸಮಿತಿ ಕೆದಿಲ – ಪೆರಾಜೆ ವತಿಯಿಂದ ಬಂಟ್ವಾಳ ಉಪ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.


ಈ ವೇಳೆ ಹಿಂದೂ ಜಾಗರಣ ವೇದಿಕೆ ದ.ಪ್ರಾಂ.ಬ.ಗಣರಾಜ ಭಟ್ ರವರು ಮಾತನಾಡಿ ಕೆದಿಲ ಹಾಗು ಪೆರಾಜೆ ಗ್ರಾಮದ ಗಡಿ ಪ್ರದೇಶವಾದ ಗಡಿಯಾರ ಸ್ವಾಗತ ನಗರದ ಬಳಿ, ಕೆದಿಲ ಗ್ರಾಮದಲ್ಲಿ ಸ.ನಂ.11/1 ರಲ್ಲಿ 14.56 ಎಕರೆ ಹಾಗು ಪೆರಾಜೆ ಗ್ರಾಮದ ಸ.ನಂ.164/1 ರಲ್ಲಿ 19.75 ಎಕರೆ ಗೋಮಾಳದ ಜಾಗವಿದ್ದು, ಕೆಲವು ವರುಷಗಳಿಂದ ಅವ್ಯಾಹತವಾಗಿ ಅತಿಕ್ರಮಣ ನಡೆಯುತ್ತಿದೆ. ಮನೆಗಳು ತಲೆಯೆತ್ತುತ್ತಲೇ ಇದೆ. ವಿದ್ಯುತ್,ನೀರಾವರಿ ವ್ಯವಸ್ಥೆಯೂ ಸರಾಗವಾಗಿ ನಡೆದಿದೆ. 2013ರಿಂದಲೇ ಅತಿಕ್ರಮಣದ ವಿರುದ್ದ ಹೋರಾಟ ನಡೆಯತ್ತಲೇ ಇದ್ದರೂ, ರಾಜಕೀಯ ವ್ಯಕ್ತಿಗಳ ಒತ್ತಡದಿಂದ ಹಾಗು ಹಣದ ಬಲದಿಂದ ಅಽಕಾರಿಗಳು ಅತಿಕ್ರಮಣ ತೆರವು ಕಾರ್ಯಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.


ಮಾರ್ಚ್ ತಿಂಗಳಿನಲ್ಲಿ ಕಂದಾಯ ಅಽಕಾರಿಗಳು ಅಕ್ರಮ ಮನೆಗಳನ್ನು ತೆರವುಗೊಳಿಸಿದ್ದರಾದರೂ ಮತ್ತೆ ಅಲ್ಲಿ ಮನೆ ಕಟ್ಟಲು ಕಾಮಗಾರಿಗಳು ನಡೆಯುತ್ತಿವೆ. ಹಾಗಾಗಿ ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ ಅವರು ಗೋಮಾಳ ಜಮೀನಿನಲ್ಲಿ ಗೋಶಾಲೆ, ಪಶು ಸಂಗೋಪನೆ ,ಪಶು ಸಂಬಂಧಿತವಾದ ಉದ್ದೇಶಿತ ಕಾರ್ಯಗಳಿಗೆ ಬಳಸಬೇಕು. ಈಗಾಗಲೇ ಅತಿಕ್ರಮಣ ಮತ್ತು ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಜಮೀನನ್ನು ಇಲಾಖೆ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಸಮಿತಿಯ ಪೆರಾಜೆ ಸಂಚಾಲಕ ಶ್ರೀನಿವಾಸ ಪೆರಾಜೆ, ಕೆದಿಲ ಸಂಚಾಲಕ ವಿಶ್ವನಾಥ ಶೆಟ್ಟಿ ಕೆದಿಲ, ನೇರಳಕಟ್ಟೆ ಸಿ.ಎ.ಬ್ಯಾಂಕ್ ನ ಅಧ್ಯಕ್ಷ ಪುಷ್ಪರಾಜ್ ಚೌಟ ಮಾಣಿ, ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ನರಸಿಂಹ ಶೆಟ್ಟಿ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ಕುಸುಮಾಧರ,ಸತೀಶ್ ,ಲಿಖಿತ್ , ತಿಲಕ್ ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಬಜರಂಗದಳ ಪ್ರಮುಖರಾದ ರೂಪೇಶ್ ಪೂಜಾರಿ, ಮಹೇಂದ್ರ ಅಶ್ವತ್ತಾಡಿ,ಚಿರಂಜೀವಿ, ಸತೀಶ್ ಮಿತ್ತೂರು, ಉದಯ ಜೋಗಿಬೆಟ್ಟು, ಹೊನ್ನಪ್ಪ ಬಡೆಕೋಡಿ, ಗ್ರಾ.ಪಂ.ಸದಸ್ಯರಾದ ಹರೀಶ್ ರೈ ಪೆರಾಜೆ, ರಾಜಾರಾಮ್ ಭಟ್ ಕಾಡೂರು, ಉಮೇಶ್ ಮುರುವ, ಶ್ಯಾಮಪ್ರಸಾದ್ ಭಟ್, ಗ್ರಾಮದ ಪ್ರಮುಖರಾದ ರಾಘವ ಗೌಡ ಪೆರಾಜೆ, ನಟರಾಜ್ ಭಟ್, ವಕೀಲರಾದ ಅರುಣ್ ಭಟ್ ಗಣಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here