ದೋಳ್ಪಾಡಿಗೆ 15 ದಿನಗಳಿಂದ ಬಾರದ ಬಸ್ – ಬಸ್ ನ ಸೌಲಭ್ಯ ಒದಗಿಸುವಂತೆ ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳಿಗೆ ಮನವಿ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿಗೆ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಪುತ್ತೂರು ಘಟಕದ ಕೆ.ಎಸ್.ಅರ್.ಟಿ.ಸಿ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿದೆ. ಸುಮಾರು 15ದಿವಸಗಳಿಂದ ದೋಳ್ಪಾಡಿಗೆ ಬಸ್ ಬಾರದಿರುವ ಬಗ್ಗೆ ಸಾರ್ವಜನಿಕರು ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದ್ದು, ಸದ್ರಿ ಅರ್ಜಿಯಲ್ಲಿ ಬಸ್ ಬಾರದೆ ಇರುವುದರಿಂದ ಶಾಲಾ ಮಕ್ಕಳಿಗೆ, ಉದ್ಯೋಗಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಬಸ್ ನ ಸೌಲಭ್ಯ ಒದಗಿಸದೆ ಇದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಗ್ರಾಮ ಪಂಚಾಯತ್ ಗೆ ನೀಡಿರುವ ಮನವಿಯಲ್ಲಿ ಉಲ್ಲೆಖಿಸಿದ್ದು, ಅದರಿಂದ ಈ ಬಗ್ಗೆ ಪರಿಶೀಲಿಸಿ ಬಸ್ ಸೌಲಭ್ಯ ಒದಗಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ನೀಡಿರುವ ಮನವಿಯಲ್ಲಿ ತಿಳಿಸಿದ್ದಾರೆ. ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಉದನಡ್ಕ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ಹಾಗೂ ದಿವಾಕರ್ ಮನವಿ ಸಲ್ಲಿಕೆ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here