ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಯಲ್ಲಿ ಪೋಷಕರ ಕ್ರೀಡಾಕೂಟ

0

ಕಾಣೆಯೂರು: ಸಂಸ್ಥೆಯು ನಿರಂತರವಾಗಿ ಪೋಷಕರ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದು ಪೋಷಕರು ಹೆಚ್ಚೆಚ್ಚು ಭಾಗವಹಿಸುವ ಮೂಲಕ ತಮ್ಮ ಮಕ್ಕಳಿಗೆ ಪ್ರೇರಕ ಶಕ್ತಿ ಆಗಬೇಕು ಎಂದು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಹೇಳಿದರು.


ಅವರು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ಪೋಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.ಧ್ವಜಾರೋಹಣವನ್ನು ನೆರವೇರಿಸಿದ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ ಅವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು . ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಜ್ಞಾನೇಶ್ವರಿ, ಹಿರಿಯ ಶಿಕ್ಷಕಿಯರಾದ ಹೇಮಾನಾಗೇಶ್ ರೈ, ವಿನಯ ವಿ ಶೆಟ್ಟಿ ಉಪಸ್ಥಿತರಿದ್ದರು. ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಮಮತಾ ಎ ಪ್ರಾರ್ಥಿಸಿದರು. ಮುಖ್ಯಗುರು ಸರಸ್ವತಿ ಎಂ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಅನಿತಾ ಜೆ ರೈ ಕಾರ್ಯಕ್ರಮ ನಿರೂಪಿಸಿದರು.

ಡಿಜಿಟಲ್ ಬೋರ್ಡ್ ಕೊಡುಗೆ
ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ ಮತ್ತು ಇಂದಿರಾ ದಂಪತಿಗಳು ಅವರ ಪುತ್ರ ವಿಶಾಲ್ 10ನೇ ತರಗತಿಯಲ್ಲಿ ಕಲಿಯುತ್ತಿದ್ದು ಅವರ ಹೆಸರಿನಲ್ಲಿ ಸಂಸ್ಥೆಗೆ ಡಿಜಿಟಲ್ ಬೋರ್ಡನ್ನು ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here