ಕೋಲ್ಪೆ: ಆಕ್ಟೀವಾ-ಕಾರು ಡಿಕ್ಕಿ, ಗಾಯ

0

ನೆಲ್ಯಾಡಿ: ಆಕ್ಟೀವಾ ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಆಕ್ಟೀವಾ ಸವಾರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನ.30ರಂದು ರಾತ್ರಿ 7.30ರ ವೇಳೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಡೆದಿದೆ.


ಆಕ್ಟೀವಾ ಸವಾರ ಶೇಖಬ್ಬ(55ವ.)ಗಾಯಗೊಂಡವರಾಗಿದ್ದಾರೆ. ಇವರು ಕೊಣಾಲು ಗ್ರಾಮದ ಪಾಂಡಿಬೆಟ್ಟಿನಲ್ಲಿ ದಿನಸಿ ಅಂಗಡಿ ಹೊಂದಿದ್ದು ಅಲ್ಲಿಂದ ಕೋಲ್ಪೆ ಮಸೀದಿಗೆಂದು ತನ್ನ ಆಕ್ಟೀವಾ(ಕೆಎ 19 ಹೆಚ್‌ಎಲ್ 2146)ದಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದವರು ಕೋಲ್ಪೆ ಮಸೀದಿ ಮುಂಭಾಗದಲ್ಲಿ ತನ್ನ ಬಲಭಾಗದ ರಸ್ತೆಯಿಂದ ಎಡಭಾಗದ ರಸ್ತೆಗೆ ಹೋಗಲು ಡಿವೈಡರ್‌ನ ಮಧ್ಯದ ತೆರೆದ ಸ್ಥಳದ ಮೂಲಕ ಹೆದ್ದಾರಿಯಲ್ಲಿ ಹೋಗುವ ವಾಹನಗಳನ್ನು ಗಮನಿಸದೇ ಚಲಾಯಿಸಿದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಪುತ್ತೂರು ಕೊಂಬೆಟ್ಟು ನಿವಾಸಿ ಅಜೇಯಕೃಷ್ಣ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು (ಕೆಎ 02, ಎಂಜಿ 9956)ಡಿಕ್ಕಿಯಾಗಿದೆ. ಘಟನೆಯಲ್ಲಿ ಶೇಖಬ್ಬ ಅವರು ರಸ್ತೆಗೆ ಬಿದ್ದು ತಲೆಗೆ ಗಾಯವಾಗಿದೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಅಜೇಯಕೃಷ್ಣ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here