ನೆಹರುನಗರ: ಕಾರು ಪಲ್ಟಿ ಮಹಿಳೆಗೆ ಗಾಯ

0

ಪುತ್ತೂರು: ನೆಹರುನಗರ ಮಾಸ್ಟರ್ ಪ್ಲಾನರಿ ಬಳಿ ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿರುವ ಘಟನೆ ನ.29ರಂದು ನಡೆದ ಬಗ್ಗೆ ವರದಿಯಾಗಿದೆ.
ಮಂಗಳೂರು ಕಡೆ ಹೋಗುತ್ತಿದ್ದ ಕಾರು ಚಾಲಕ ಉದಯ ಎಂ ಅವರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಕಾವು ಮಾಡ್ನೂರು ಗ್ರಾಮದ ಮಾಣಿಯಡ್ಕ ದಿ.ನಾರಾಯಣ ಮಣಿಯಾಣಿ ಎಂಬವರ ಪತ್ನಿ ಬೇಬಿ (68 ವ) ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here