ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ

0

ನಿಡ್ಪಳ್ಳಿ; ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಇದರ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.2 ರಂದು ನಡೆಯಿತು.

ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬ್ರಹ್ಮರಗುಂಡ ದೀಪ ಬೆಳಗಿಸಿ ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಅಶೋಕ್ ಕುಮಾರ್ ರೈ, ಬೆಟ್ಟಂಪಾಡಿ ಪದವಿ ಕಾಲೇಜು ಪ್ರಾಂಶುಪಾಲ ವರದರಾಜ  ಚಂದ್ರಗಿರಿ ಪ್ರಧಾನ ಭಾಷಣ ಮಾಡಿದರು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು,ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸ.ಸಂ ದ ಅಧ್ಯಕ್ಷ ಕೆ.ಎಸ್.ರಂಗನಾಥ ರೈ ಗುತ್ತು, ಮಂಗಳೂರು ಎಂ.ಅರ್.ಪಿ.ಎಲ್ ನ ಸೀತಾರಾಮ ರೈ ಕೈಕಾರ, ಬೆಟ್ಟಂಪಾಡಿ ಮೆಸ್ಕಾಂ ಕಿರಿಯ ಅಭಿಯಂತರ ಪುತ್ತು.ಜೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಜಯಪ್ರಕಾಶ್ ರೈ ಚೆಲ್ಯಡ್ಕ, ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಬಳಗದ ಕಾರ್ಯದರ್ಶಿ ಹಮೀದ್ ಕೊಮ್ಮೆಮಾರ್, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಮೊಯಿದು ಕುಂಞ ಕೋನಡ್ಕ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಶೆಟ್ಟಿ, ಗ್ರೇಟಾ ಡಿ’ ಸೋಜಾ,ಅವಿನಾಶ್ ರೈ, ಕೃಷ್ಣ ಪ್ರಸಾದ್ ಆಳ್ವ ಚೆಲ್ಯಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಭಾಸ್ಕರ ಕರ್ಕೇರ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಾಧವ ಪೂಜಾರಿ ರೆಂಜ, ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಪ್ರಭಾರ ಪ್ರಾಂಶುಪಾಲ ಸೈಯ್ಯದ್ ಫಾರೂಕ್, ಪ್ರೌಢಶಾಲಾ ಮುಖ್ಯ ಗುರು ವಿಜಯ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here