ರಾಜ್ಯ ಮಟ್ಟದ ಮಕ್ಕಳ ಗೋಷ್ಠಿಯಲ್ಲಿ ಧನ್ವಿ ರೈ ಕೋಟೆ

0

ಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಧನ್ವಿ ರೈ ಕೋಟೆ ಪಾಣಾಜೆ ಇವರು ನ 26 ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಉಮ್ಮಚಗಿಯಲ್ಲಿ ರಾಜ್ಯ ಮಟ್ಟದ ಮಕ್ಕಳ ಗೋಷ್ಠಿಯಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ ರಾಮಾಯಣ ವಿಷಯಕ್ಕೆ ಸಂಬಂಧಿಸಿದಂತೆ ನಾ ಕಂಡಂತೆ ಲಕ್ಷ್ಮಣ ಎಂಬ ವಿಷಯದ ಕುರಿತು ಮಾತನಾಡಿದರು.ಇವರು‌ ಕೋಟೆ ರವಿಶಂಕರ್ ರೈ ಮತ್ತು ವಿಜಯ ದಂಪತಿ ಪುತ್ರಿ.
ರಾಜ್ಯದ 17 ಜಿಲ್ಲೆಯ ಮಕ್ಕಳು ಈ ಕಾರ್ಯಕ್ರಮದಡಿಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here