ಬಡಗನ್ನೂರು ಕ್ರೀಡಾ ಕಾರಂಜಿ ಕ್ರೀಡಾಜ್ಯೋತಿಗೆ ಸ್ವಾಗತ

0

ಬಡಗನ್ನೂರುಃ ಪುತ್ತೂರು ತಾಲೂಕಿನಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ 17ರ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟವ ಜ್ಯೋತಿಯ ಕ್ರೀಡಾ ಕಾರಂಜಿಯ ಕ್ರೀಡಾ ಜ್ಯೋತಿಯನ್ನು ಬಡಗನ್ನೂರು  ಶಾಲಾ ಗಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ, ಎಸ್.ಡಿ.ಯಂ.ಸಿ ಅಧ್ಯಕ್ಷ ಬಾಬು ಮೂಲ್ಯ ಹಾಗೂ  ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಸ್ವಾಗತಿಸಿದರು.  

ಬಡಗನ್ನೂರು ಸ.ಉ.ಹಿ.ಪ್ರಾ  ಶಾಲಾ ಆವರಣದಲ್ಲಿ ಪುತ್ತೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ ಹೊರೆಕಾಣಿಕೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಕ್ರೀಡಾ ಜ್ಯೋತಿ ಹೊತ್ತ ರಥವನ್ನು ಮೆರವಣಿಗೆಯಲ್ಲಿ ಶಾಲಾ ಆವರಣಕ್ಕೆ ಕರೆ ತಂದರು ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, . ಶಾಲಾ ಶಿಕ್ಷಕರು ಹಾಗೂ  ಸ್ಥಳೀಯ ಶಿಕ್ಷಣಾಭಿಮಾನಿಗಳು , ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here