ರಾಜ್ಯ ಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿಗೆ ಸವಣೂರಿನಲ್ಲಿ ಸ್ವಾಗತ

0

ಪುತ್ತೂರು: ರಾಜ್ಯದ ಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಮತ್ತು ಹಸಿರುವಾಣಿ ಕಾರ್ಯಕ್ರಮಕ್ಕೆ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರುಗಳು,ಮತ್ತು ಎಲ್ಲಾ ಕ್ರೀಡಾಭಿಮಾನಿಗಳಿಂದ ಅಭೂತಪೂರ್ವ ಸ್ವಾಗತ ದೊರೆಯಿತು.

ಎಲ್ಲಾ ಬಂಧುಗಳಿಗೂ ಕ್ರೀಡಾ ಜ್ಯೋತಿ ಸಮಿತಿಯಿಂದ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ- ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ,ಅಧ್ಯಕ್ಷೆ ಸುಂದರಿ ಬಂಬಿಲ, ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಚಾಲು ಹಾಗೂ ಗ್ರಾ.ಪಂ, ಎಲ್ಲಾ ಸದಸ್ಯರು, ಸವಣೂರು ಶಾಲಾ ಮುಖ್ಯ ಗುರು ನಿಂಗರಾಜು, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ ಸಹಿತ ನೂರಾರು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here