ಬರೆಪ್ಪಾಡಿ ಜತ್ತಪ್ಪ ರೈಯವರ ನಿವಾಸಕ್ಕೆ ಸಂಸದ ನಳಿನ್ ಕುಮಾರ್ ಭೇಟಿ

0

ಪುತ್ತೂರು: ಹಿರಿಯ ಸಾಮಾಜಿಕ ಮುಂದಾಳು ಹಾಗೂ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಜತ್ತಪ್ಪ ರೈ ಬರೆಪ್ಪಾಡಿಯವರ ನಿವಾಸಕ್ಕೆ ದ.1 ರಂದು ದ.ಕ. ಸಂಸದ ಹಾಗೂ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು‌ ಭೇಟಿ ನೀಡಿದರು.

ಸಂಸದ ನಳಿನ್ ಕುಮಾರ್ ರವರನ್ನು ಜತ್ತಪ್ಪ ರೈ ಮತ್ತು ಅವರ ಪತ್ನಿ ಸುಗುಣಾ ಜೆ.ರೈಯವರು ಸ್ವಾಗತಿಸಿದರು. ಪುತ್ತೂರು ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮೆದು, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ- ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾ.ಪಂ, ಸದಸ್ಯ ತೀರ್ಥ ರಾಮ ಕೆಡೆಂಜಿ, ಜಿ.ಪಂ, ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು ಹಾಗೂ ಪುತ್ತೂರು ತುಳುಕೂಟದ ನಿರ್ದೇಶಕ ಉಮಾ ಪ್ರಸಾದ್ ರೈ ನಡುಬೈಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here