ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ”ಸಾಧನಾ ಸಮ್ಮಾನ್” ಕಾರ್ಯಕ್ರಮ

0

ಪುತ್ತೂರು: ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಡಿ.2ರಂದು ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಾಧನಾ ಸಮ್ಮಾನ್ ಕಾರ್ಯಕ್ರಮವು ಇದೇ ಡಿ.1ರಂದು ನಡೆಯಿತು.

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ, ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತೆ, ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿತ್ತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಬಹುಮಾನವನ್ನು ವಿತರಿಸಿ ಪುರಸ್ಕರಿಸಲಾಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ವಿಜಯಾನಂದ ಕೈಂತಜೆ ಹಾಗೂ ಶ್ರೀಮತಿ ಪ್ರೀತಿ ಶೆಣೈ, ಪೋಷಕ ಸಂಘದ ಅಧ್ಯಕ್ಷೆ ಅಕ್ಷತಾ ಶೆಣೈ ಪಿ ಹಾಗೂ ಉಪಾಧ್ಯಕ್ಷ ಗಂಗಾಧರ ರೈ ಅವರು ಆಗಮಿಸಿ ಬಹುಮಾನಗಳನ್ನು ವಿತರಿಸಿದರು. ಪ್ರಾಂಶುಪಾಲೆ ಸಿಂಧು ವಿ. ಜಿ ಹಾಗೂ ಉಪಪ್ರಾಂಶುಪಾಲೆ ಹೇಮಾವತಿ ಎಂ. ಎಸ್ ಅವರು ಉಪಸ್ಥಿತರಿದ್ದರು. ಶಿಕ್ಷಕಿ ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here