ಸವಣೂರು: ಬಡ ವಿಧವೆಗೆ ಮನೆ ಹಸ್ತಾಂತರ ಕಾರ್ಯಕ್ರಮ

0

ಪುತ್ತೂರು: ಸವಣೂರು ವೆಲ್ಫೇರ್ ಅಸೋಸಿಯೇಶನ್ ಜುಬೈಲ್ ಮತ್ತು ಸ್ಥಳೀಯ ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರ ಸಹಕಾರದಿಂದ ಸವಣೂರು ಗ್ರಾ.ಪಂ ವ್ಯಾಪ್ತಿಯ ಗುಂಡಿಲ ಪ್ರದೇಶದಲ್ಲಿ ಬಡ ವಿಧವೆ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.


ಚಾಪಲ್ಲ ಬದ್ರಿಯ ಜುಮಾ ಮಸ್ಜಿದ್‌ನ ಮದರ್ರಿಸ್ ಮಹಮ್ಮದ್ ಅಶ್ರಫ್ ಪಾಝಿಲ್ ಬಾಖವಿ ದುವಾಶಿರ್ವಚನಗೈದರು. ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ ಕೀಲಿ ಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಝಾಕ್ ಕೆನರಾ, ಸವಣೂರು ಗ್ರಾ.ಪಂ ಸದಸ್ಯ ರಫೀಕ್ ಎಂ ಎ, ಅಬೂಬಕ್ಕರ್ ಮುಸ್ಲಿಯಾರ್ ಕಾಯರ್ಗ, ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಜುಬೈಲ್ ಇದರ ಅಧ್ಯಕ್ಷ ಹಾಜಿ ಮಹಮ್ಮದ್ ಬಸ್ತಿ, ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಝಕರಿಯಾ, ಉದ್ಯಮಿಗಳಾದ ಅಬ್ದುಲ್ ಖಾದರ್ ಹಾಜಿ, ಅಬ್ಬಾಸ್ ಹಾಜಿ ಕೆಲೆಂಬಿರಿ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here