ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಕೊಯಿಲ ಶಾಲಾ ಜನನಿಗೆ ದ್ವಿತೀಯ ಸ್ಥಾನ

0

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ದಕ್ಷಿಣ ಹಾಗೂ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2023 ಸ್ಪರ್ಧೆಯ ಹಿರಿಯ ವಿಭಾಗದ ಕನ್ನಡ ಕಂಠ ಪಾಠ ಸ್ಪರ್ಧೆಯಲ್ಲಿ ಕೊಯಿಲ ಗ್ರಾಮದ ಕೆ.ಸಿ ಫಾರ್ಮ್ ಉನ್ನತ ಹಿರಿಯ ಪ್ರಾಥಮಿಕ ಶಾಲಾ ೭ನೇ ತರಗತಿ ವಿದ್ಯಾರ್ಥಿನಿ ಜನನಿ ಪಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈಕೆ ಕೊಯಿಲ ಗ್ರಾಮದ ಪುತ್ಯೆ ವಿಶ್ವನಾಥ ಗೌಡ ಮತ್ತು ಚಂದ್ರಾವತಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here