ರಣಮಂಗಲ ಸಭಾಭವನ ನಿರ್ಮಾಣಕ್ಕೆ ಭೂಮಿ ಪೂಜೆ- ಶಿಲಾನ್ಯಾಸ ಕಾರ್ಯಕ್ರಮ

0

ಪಾಣಾಜೆ: ಆರ್ಲಪದವು ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ರಣಮಂಗಲ ಸಭಾಭವನ ನಿರ್ಮಾಣ ಸಮಿತಿ ಮೂಲಕ ನಿರ್ಮಾಣವಾಗಲಿರುವ ರಣಮಂಗಲ ಸಭಾಭವನಕ್ಕೆ ಡಿ.6ರಂದು ಬುಧವಾರ ವೇದಮೂರ್ತಿ ಶ್ರೀಕೃಷ್ಣ ಭಟ್ಯಮೂಲೆ ಇವರ ಧಾರ್ಮಿಕ ಕಾರ್ಯಗಳೊಂದಿಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರರೂ, ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಶ್ರೀಕೃಷ್ಣ ಬೊಳ್ಳಿಲ್ಲಾಯ ಕಡಮಾಜೆ ಇವರು ಶಿಲಾನ್ಯಾಸ ನೆರವೇರಿಸಿದರು.

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು,ಸಮಿತಿಯ ಅಧ್ಯಕ್ಷ ಸದಾಶಿವ ರೈ ಸೂರಂಬೈಲು, ಕೋಶಾಧಿಕಾರಿ ರಮಾನಾಥ ರೈ ಪಡ್ಯಂಬೆಟ್ಟು, ಉಪಾಧ್ಯಕ್ಷ ವರದರಾಯ ನಾಯಕ್, ಚಂದ್ರ ಎ.ಬಿ, ಜಯಶ್ರೀ ದೇವಸ್ಯ, ಗೌರವ ಸಲಹೆಗಾರಾದ ಲಕ್ಷ್ಮೀನಾರಾಯಣ ರೈ ಕೆದಂಬಾಡಿ, ಪುಷ್ಪರಾಜ್ ಶೆಟ್ಟಿ ಕೋಟೆ, ಡಾ.ಅಖೀಲೇಶ್ ಭಟ್, ಜಗನ್ಮೋಹನ್ ರೈ ಸೂರಂಬೈಲ್, ಶ್ರೀ ಹರಿ ಪಾಣಾಜೆ, ಶ್ರೀಪ್ರಸಾದ್ ಪಾಣಾಜೆ, ಶಿವಕುಮಾರ್ ಕಾಕೆಕೊಚ್ಚಿ, ಉಪೇಂದ್ರ ಬಲ್ಯಾಯ ದೇವಸ್ಯ, ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ರಘುನಾಥ ಪಾಟಾಳಿ, ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ   ಧನಂಜಯ ಯಾದವ್, ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷ  ಶಾರದಾ ಗೋಪಾಲ ಗ್ರಾ.ಪಂ ಸದಸ್ಯರಾದ ಮೋಹನ ನಾಯ್ಕ ತೂಂಬಡ್ಕ, ನಾರಾಯಣ ನಾಯಕ್ ಅಪಿನಿಮೂಲೆ, ಕೃಷ್ಣಪ್ಪ ಪೂಜಾರಿ, ನಾರಾಯಣ ಪೂಜಾರಿ ತೂಂಬಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here